BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ.

ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ ಸಾವನ್ನಪ್ಪಿದ್ದಾರೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಕೈನೂರ(23) ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ(19) ಮೃತಪಟ್ಟವರು ಎನ್ನಲಾಗಿದೆ.

ಮಲಗಲದಿನ್ನಿ ಗ್ರಾಮದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read