ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರ್ ಡಿಕ್ಕಿ: ಇಬ್ಬರ ಸಾವು

ಹಾವೇರಿ: ರಸ್ತೆ ಬದಿ ಮರಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ಹೊರವಲಯದಲ್ಲಿ ನಡೆದಿದೆ.

ಜಯಂತಿ(50), ಕಾರ್ ಚಾಲಕ ವಿಠ್ಠಲ್(47) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪುತ್ರಿಯನ್ನು ದುಬೈಗೆ ಕಳುಹಿಸಿ ಊರಿಗೆ ಮರಳುತ್ತಿದ್ದ ವೇಳೆ ದುರಂತ ಸಂಭವಿಸಿದೆ.

ಮೃತರು ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಹುಲೇಕಲ್ ಗ್ರಾಮದವರು. ಆಲ್ಟೊ ಕಾರ್ ನಲ್ಲಿ ಶಿರಸಿಗೆ ತೆರಳುವಾಗ ಅಪಘಾತ ಸಂಭವಿಸಿದೆ. ಹಗಲು, ರಾತ್ರಿ ಕಾರ್ ಚಾಲನೆ ಮಾಡಿದ್ದರಿಂದ ಚಾಲಕ ವಿಠ್ಠಲ್ ನಿತ್ರಾಣಗೊಂಡಿದ್ದರು. ನಿದ್ದೆ ಮಂಪರಿನಲ್ಲಿ ಕಾರ್ ಚಲಾಯಿಸಿ ನಿಯಂತ್ರಣ ತಪ್ಪಿ ಘಟನೆ ನಡೆದಿದೆ. ರಸ್ತೆ ಬದಿಯ ಹುಣಸೆ ಮರಕ್ಕೆ ಕಾರ್ ಡಿಕ್ಕಿಯಾಗಿ ಚಾಲಕ, ಮಹಿಳೆ ಸಾವನ್ನಪ್ಪಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read