ಟಿಪ್ಪರ್ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ: ಟಿಪ್ಪರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಸಮೀಪ ನಡೆದಿದೆ. ಅಪಘಾತದಲ್ಲಿ ಎಂಟು ವರ್ಷದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹೊಸದರೋಜಿ ಗ್ರಾಮದ ನಾಗರಾಜ್(40), ಪಾರ್ವತಿ(37) ಮೃತಪಟ್ಟವರು ಎಂದು ಹೇಳಲಾಗಿದೆ. ಪತ್ನಿ, ಪುತ್ರನೊಂದಿಗೆ ನಾಗರಾಜು ಬೈಕ್ ನಲ್ಲಿ ಬಳ್ಳಾರಿಗೆ ತೆರಳುವಾಗ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ತಲೆ ಭಾಗಕ್ಕೆ ಗಾಯವಾಗಿ ನಾಗರಾಜ್, ಪಾರ್ವತಿ ಮೃತಪಟ್ಟಿದ್ದಾರೆ. ಬಾಲಕನನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿ ಗ್ರಾಮೀಣ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read