ರಸ್ತೆ ದಾಟುವಾಗಲೇ ಅವಘಡ: ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ಸಾವು

ದಾವಣಗೆರೆ: ಹಾಲಿನ ವಾಹನ ಡಿಕ್ಕಿಯಾಗಿ ಆಯುರ್ವೇದ ವಿದ್ಯಾರ್ಥಿ ಮೃತಪಟ್ಟ ಘಟನೆ ದಾವಣಗೆರೆ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ.

ಮನೋಜ್ ಕುಮಾರ್(20) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ಮನೋಜ್ ಕುಮಾರ್ ದಾವಣಗೆರೆಯ ಹೆಚ್.ಕೆ.ಆರ್. ನಗರದ ನಿವಾಸಿ ಶಿವಕುಮಾರ ಸ್ವಾಮಿ ಅವರ ಪುತ್ರರಾಗಿದ್ದಾರೆ. ರಸ್ತೆ ದಾಟುವಾಗ ಹಾಲಿನ ವಾಹನ ಡಿಕ್ಕಿಯಾಗಿ ಮನೋಜ್ ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read