ಅಪಘಾತ ಪ್ರಕರಣಕ್ಕೆ ಟ್ವಿಸ್ಟ್: ಪೊಲೀಸ್ ಅಳಿಯನಿಂದ ಮಾವನ ಕೊಲೆ

ಬಾಗಲಕೋಟೆ: ಜಮೀನು ವಿವಾದ ಹಿನ್ನೆಲೆಯಲ್ಲಿ ಅಳಿಯನೇ ಮಾವನನ್ನು ಕೊಲೆ ಮಾಡಿದ ಘಟನೆ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶಿರಳಾದ ಮಡ್ಡಿಸಾಬ್ ಗಲಗಲಿ(55) ಕೊಲೆಯಾದ ವ್ಯಕ್ತಿ. ವಾಹನ ಹಾಯಿಸಿ ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಅಳಿಯ, ವಿಜಯಪುರದಲ್ಲಿ ಪೊಲೀಸ್ ಕಾನ್ಸ್ ಟೆಬಲ್ ಆಗಿರುವ ಮನ್ಸೂರ ವಾಲೀಕಾರ(42), ಆತನ ಸಹೋದರ ಮೈಬೂಬ ವಾಲಿಕಾರ(40) ಅವರನ್ನು ಬಂಧಿಸಲಾಗಿದೆ.

ಡಿಸೆಂಬರ್ 8 ರಂದು ಪತ್ನಿಯೊಂದಿಗೆ ಮಡ್ದೆಸಾಬ್ ಬೈಕ್ ನಲ್ಲಿ ತೆರಳುವ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ನಡೆಸಿದಾಗ ಅಳಿಯ ಮನ್ಸೂರ್ ತನ್ನ ಸಹೋದರನೊಂದಿಗೆ ಸೇರಿ ಕೊಲೆ ಮಾಡಿರುವುದು ಗೊತ್ತಾಗಿದೆ.

ಶಿರೋಳ ಗ್ರಾಮದಲ್ಲಿರುವ ಜಮೀನಿಗೆ ಸಂಬಂಧಿಸಿದ ವ್ಯಾಜ್ಯ ಹಿನ್ನೆಲೆಯಲ್ಲಿ ಕೊಲೆ ನಡೆದಿರುವುದು ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ಮನ್ಸೂರ ಮತ್ತು ಮೈಬೂಬ ಅವರ ವಿಚಾರಣೆ ನಡೆಸಿದಾಗ ಕೊಲೆ ವಿಷಯ ಬೆಳಕಿಗೆ ಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read