BREAKING: ಅಪಘಾತದ ನೆಪದಲ್ಲಿ ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಹತ್ಯೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗಂಗಾಪುರ ಬಳಿ ಕಾರ್ ಅಪಘಾತ ಮಾಡಿ ಯುವಕನ ಕೊಲೆ ಮಾಡಲಾಗಿದೆ.

ಕೋಲಾರ ಮೂಲದ ಭಾರ್ಗವ್(24) ಹತ್ಯೆಯಾದವರು ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ಭಾರ್ಗವ್ ನನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೋಲಾರದಿಂದ ಹೊಸಕೋಟೆ ಕಡೆ ಕಾರ್ ನಲ್ಲಿ ಭಾರ್ಗವ್ ಬರುತ್ತಿದ್ದಾಗ ಅವರ ಕಾರ್ ಚೇಸ್ ಮಾಡಿದ ದುಷ್ಕರ್ಮಿಗಳು ಬ್ರೇಕ್ ಹಾಕಿದ್ದಾರೆ. ಈ ವೇಳೆ ಆರೋಪಿಗಳ ವಾಹನಕ್ಕೆ ಭಾರ್ಗವ್ ಕಾರ್ ಡಿಕ್ಕಿಯಾಗಿದೆ.

ಇದೇ ನೆಪದಲ್ಲಿ ಗಲಾಟೆ ಮಾಡಿ ಲಾಂಗ್, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯ ನಂತರ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read