BIG NEWS: ನಾಳೆ ಮಧ್ಯಾಹ್ನ ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಪ್ರಕಟ: ಹೈಕೋರ್ಟ್ ನತ್ತ ಎಲ್ಲರ ಚಿತ್ತ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರ ಜಾಮೀನು ಅರ್ಜಿ ಕುರಿತಾದ ತೀರ್ಪನ್ನು ನಾಳೆ ಹೈಕೋರ್ಟ್ ಪ್ರಕಟಿಸಲಿದೆ.

ನಾಳೆ ಮಧ್ಯಾಹ್ನ 2:30 ಕ್ಕೆ ಹೈಕೋರ್ಟ್ ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠದಿಂದ ತೀರ್ಪು ಪ್ರಕಟಿಸಲಾಗುವುದು.

ಬೆನ್ನು ನೋವಿನ ಕಾರಣ ಚಿಕಿತ್ಸೆಗಾಗಿ ದರ್ಶನ್ ಗೆ ಹೈಕೋರ್ಟ್ ಆರು ವಾರಗಳ ಮಧ್ಯಂತರ ಜಾಮೀನು ನೀಡಿತ್ತು. ಡಿಸೆಂಬರ್ 11ರಂದು ದರ್ಶನ್ ಸರ್ಜರಿಗೆ ದಿನಾಂಕ ನಿಗದಿಯಾಗಿದ್ದರಿಂದ ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ದರ್ಶನ್ ಪರ ವಕೀಲ ಸಿ.ವಿ. ನಾಗೇಶ್ ಹೈಕೋರ್ಟ್ ಗೆ ಮನವಿ ಮಾಡಿದ್ದರು.

ನಾಳೆ ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ನಿಂದ ದರ್ಶನ್ ಜಾಮೀನು ಅರ್ಜು ಕುರಿತಾದ ಆದೇಶ ಪ್ರಕಟಿಸಲಾಗುವುದು. ಎಲ್ಲರ ಚಿತ್ತ ಹೈಕೋರ್ಟ್ ನತ್ತ ನೆಟ್ಟಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read