ಫಾರಂಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಣೆ: ನಟ ದರ್ಶನ್ ದಂಪತಿ ವಿಚಾರಣೆ ಮುಂದೂಡಿಕೆ

ಮೈಸೂರು: ಫಾರಂ ಹೌಸ್ ನಲ್ಲಿ ವಿದೇಶಿ ಬಾತುಕೋಳಿ ಸಾಕಿದ ಪ್ರಕರಣ ಸಂಬಂಧ ನಟ ದರ್ಶನ್ –ವಿಜಯಲಕ್ಷ್ಮಿ ದಂಪತಿಯ ವಿಚಾರಣೆಯನ್ನು ಟಿ. ನರಸೀಪುರ ನ್ಯಾಯಾಲಯ ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ವಿದೇಶಿ ಬಾತುಕೋಳಿ ಸಾಕಲು ಯಾವುದೇ ಅನುಮತಿ ಪಡೆದುಕೊಳ್ಳದ ಹಿನ್ನೆಲೆಯಲ್ಲಿ ನಟ ದರ್ಶನ್ ದಂಪತಿಯ ವಿರುದ್ಧ ಎರಡು ವರ್ಷದ ಹಿಂದೆ ಅರಣ್ಯ ಇಲಾಖೆ ನೋಟೀಸ್ ನೀಡಿ ಎಫ್ಐಆರ್ ದಾಖಲಿಸಲಾಗಿತ್ತು. ಟಿ. ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಫಾರಂ ಹೌಸ್ ನಲ್ಲಿ ದರ್ಶನ್ ಅವರು ಬಾರ್ ಹೆಡೆಡ್ ಗೂಸ್ ಬಾತುಕೋಳಿ ಸಾಕಿದ್ದರು. ಈ ಹಿನ್ನೆಲೆಯಲ್ಲಿ ದರ್ಶನ್, ವಿಜಯಲಕ್ಷ್ಮಿ, ತೋಟದ ಮ್ಯಾನೇಜರ್ ನಾಗರಾಜು ಅವರಿಗೆ ನ್ಯಾಯಾಲಯ ನೋಟಿಸ್ ನೀಡಿತ್ತು. ಅಂತೆಯೇ ಶುಕ್ರವಾರ ಟಿ. ನರಸೀಪುರ ಕೋರ್ಟ್ ನಲ್ಲಿ ಪ್ರಕರಣದ ವಿಚಾರಣೆ ನಡೆದಿದ್ದು, ಸೆಪ್ಟಂಬರ್ 4ಕ್ಕೆ ವಿಚಾರಣೆ ಮುಂದೂಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read