BIG NEWS : ಈ ಬಾರಿ ವಾಲ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಗೆ ಆಹ್ವಾನವಿಲ್ಲ..ಯಾಕೆ ಗೊತ್ತೇ..?

ದಾವಣಗೆರೆ : ಈ ಬಾರಿ ನಟ ಕಿಚ್ಚ ಸುದೀಪ್ ಅವರಿಗೆ ವಾಲ್ಮೀಕಿ ಜಾತ್ರೆಗೆ ಆಹ್ವಾನವಿಲ್ಲ. ಹೌದು. ಈ ಮೂಲಕ ಕಿಚ್ಚನನ್ನು ನೋಡಬೇಕು ಎಂದು ಅಂದುಕೊಂಡಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ.

ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಫೆ.8 ಹಾಗೂ 9 ರಂದು ಜಾತ್ರೆ ನಡೆಯಲಿದ್ದು, ಜಾತ್ರೆಗೆ ಆಹ್ವಾನ ನೀಡದಿರಲು ಜಾತ್ರೆ ಕಮಿಟಿ ನಿರ್ಧರಿಸಿದೆ.

ಈ ಹಿಂದೆ ಜಾತ್ರೆಗೆ ಕಿಚ್ಚ ಸುದೀಪ್ ಬಂದಾಗ ನೂಕು ನುಗ್ಗಲು ಉಂಟಾಗಿ ಭಾರಿ ಗಲಾಟೆ ಆಗಿತ್ತು. ಸುದೀಪ್ ಬಂದಾಗ ಜಾತ್ರೆಯಲ್ಲಿ ಗಲಾಟೆ ಆಗಬಾರದು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. 2023 ರ ಫೆ.9 ರಂದು ಸಭಾ ಕಾರ್ಯಕ್ರಮಕ್ಕೆ ಸುದೀಪ್ ಬರುತ್ತಾರೆ ಎಂದು ಹೇಳಲಾಗಿತ್ತು, ಆದರೆ ಕೊನೆಗೆ ಸುದೀಪ್ ಬರಲ್ಲ ಎಂದು ಹೇಳುತ್ತಿದ್ದಂತೆ ಅಭಿಮಾನಿಗಳು ಚೇರ್ ಗಳನ್ನು ಪುಡಿ ಮಾಡಿ ಆಕ್ರೋಶ ಹೊರ ಹಾಕಿದ್ದರು. ನಂತರ ಪೊಲೀಸರು ಲಾಠಿಚಾರ್ಜ್ ಮಾಡಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read