BREAKING: ಸೂರಣಗಿಗೆ ಸಾಂತ್ವನ ಹೇಳಲು ಬಂದ ನಟ ಯಶ್ ಪೋಷಕರ ಆಕ್ರಂದನ ಕಂಡು ಭಾವುಕ

ಗದಗ: ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಬರ್ತಡೇ ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿದ್ದು, ಮಾಹಿತಿ ತಿಳಿದ ಯಶ್ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.

ಕಟೌಟ್ ಕಟ್ಟುವಾಗ ವಿದ್ಯುತ್ ಪ್ರವಹಿಸಿ ಹನುಮಂತ ಹರಿಜನ(21), ಮುರಳಿ ನಡುವಿನಮನೆ(20), ನವೀನ್(19) ಮೃತಪಟ್ಟಿದ್ದಾರೆ. ಮಂಜುನಾಥ, ದೀಪಕ್, ಪ್ರಕಾಶ್ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗೋವಾದಿಂದ ಹುಬ್ಬಳ್ಳಿಗೆ ಆಗಮಿಸಿದ ಯಶ್ ಅಲ್ಲಿಂದ ಸೂರಣಗಿಗೆ ಆಗಮಿಸಿದ್ದು, ಮುರಳಿ, ನವೀನ್, ಹನುಮಂತ ಅವರ ನಿವಾಸಕ್ಕೆ ತೆರಳಿದ ಯಶ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಪೋಷಕರ ಕೈಹಿಡಿದುಕೊಂಡು ಸಾಂತ್ವನ ಹೇಳಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬದವರ ಕಣ್ಣೀರು ಕಂಡು ಯಶ್ ಭಾವುಕರಾಗಿದ್ದಾರೆ.

ಹುಟ್ಟುಹಬ್ಬದ ಸಂಭ್ರಮಾಚರಣೆಗಾಗಿ ಹಲವು ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಆದರೆ ದುರಂತ ನಡೆದಿದೆ ಎಂದು ಅಭಿಮಾನಿಗಳು ಯಶ್ ಅವರಿಗೆ ಹೇಳಿದ್ದಾರೆ. ಯಶ್ ಅವರನ್ನು ನೋಡಲು ಅಭಿಮಾನಿಗಳ ನೂಕು ನುಗ್ಗಲು ಉಂಟಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read