ನಟಿ ಲೀಲಾವತಿ ಭಾರತ ಕಂಡ ಶ್ರೇಷ್ಠ ಕಲಾವಿದೆ : ನಟ ಉಪೇಂದ್ರ ಭಾವುಕ

ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ ನಿಧನಕ್ಕೆ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ. ಇಂದು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿದ ನಟ ಉಪೇಂದ್ರ ಲೀಲಾವತಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ನಟಿ ಲೀಲಾವತಿ ಭಾರತ ಕಂಡ ಶ್ರೇಷ್ಠ ಕಲಾವಿದೆ , ಪಶು ಆಸ್ಪತ್ರೆ ಕಟ್ಟಿಸುವುದು ಸೇರಿದಂತೆ ಹಲವು ಸಮಾಜ ಸೇವೆ ಮಾಡಿ ಹೋಗಿದ್ದಾರೆ. ವಿನೋದ್ ರಾಜ್ ಕುಮಾರ್ ಗೆ ದುಃಖ ಭರಿಸುವ ಶಕ್ತಿಯನ್ನು ಆ ದೇವರು ನೀಡಲಿ ಎಂದು ನಟ ಉಪೇಂದ್ರ ಭಾವುಕರಾಗಿ ಮಾತನಾಡಿದ್ದಾರೆ.

ಹಿರಿಯ ನಟಿ ಲೀಲಾವತಿ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.ಇಂದು ಸಂಜೆ ಅವರ ಅಂತ್ಯಕ್ರಿಯೆ ನೆರವೇರಲಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read