31 ವರ್ಷಗಳ ನಂತರ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಹಿಂದೂಗಳಿಂದ ಪೂಜೆ ನಡೆಯುತ್ತಿದ್ದು, ಇದರ ಮೊದಲ ವಿಡಿಯೋ ಬಿಡುಗಡೆ ಆಗಿದೆ.
ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ (ಜನವರಿ 31) ಆವರಣದಲ್ಲಿರುವ ನೆಲಮಾಳಿಗೆಯಲ್ಲಿ ಹಿಂದೂಗಳಿಗೆ ಪೂಜಿಸುವ ಹಕ್ಕನ್ನು ನೀಡುವಂತೆ ಆದೇಶಿಸಿದೆ. ಈ ಮೂಲಕ ಜ್ಞಾನವಾಪಿಯ ವ್ಯಾಸ್ ಜಿ ಅವರ ನೆಲಮಾಳಿಗೆಯಲ್ಲಿ ಹಿಂದೂಗಳು ಪೂಜಿಸುವ ಹಕ್ಕನ್ನು ಪಡೆದಿದ್ದಾರೆ.
ಹಿಂದೂಗಳು ಇಂದು ಮುಂಜಾನೆ 3 ಗಂಟೆ ಸುಮಾರಿಗೆ ನೆಲಮಾಳಿಗೆಯಲ್ಲಿ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
https://twitter.com/Vishnu_Jain1/status/1752982001236549852?ref_src=twsrc%5Etfw%7Ctwcamp%5Etweetembed%7Ctwterm%5E1752982001236549852%7Ctwgr%5E8a548d01865f1c4df0ff6ba189e22f0131cfbd68%7Ctwcon%5Es1_&ref_url=https%3A%2F%2Fkannadanewsnow.com%2Fkannada%2Fwatch-puja-resumes-at-gyanvapi-mosque-after-three-decades-heres-the-first-scene%2F