ರೈತರಿಗೆ ಹೆಕ್ಟೇರ್ ಗೆ 10,000 ರೂ. ನೆಟೆ ರೋಗ ಪರಿಹಾರ ಬಿಡುಗಡೆ

ಬೆಂಗಳೂರು: ಮುಂಗಾರು ಹಂಗಾಮಿನಲ್ಲಿ ನಟೆ ರೋಗದಿಂದ ತೊಗರಿ ಬೆಳೆಗೆ ಹಾನಿಯಾಗಿದ್ದು, ಮೊದಲ ಹಂತದ ಪರಿಹಾರವಾಗಿ 74 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

2022 -23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ನಟೆ ರೋಗದಿಂದ ಕಲ್ಬುರ್ಗಿ ಜಿಲ್ಲೆಯಲ್ಲಿ ಒಂದು 1,98,488 ಹೆಕ್ಟೇರ್ ಪ್ರದೇಶದಲ್ಲಿನ ತೊಗರಿ ಬೆಳೆ ಹಾನಿಯಾಗಿದೆ. ಅದೇ ರೀತಿ ಬೀದರ್ ಜಿಲ್ಲೆಯಲ್ಲಿ 14,495 ಹೆಕ್ಟೇರ್, ವಿಜಯಪುರ ಜಿಲ್ಲೆಯಲ್ಲಿ 20,401 ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ 10,259 ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾಳಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ಹಾನಿಗೊಳಗಾದ ರೈತರಿಗೆ ಪ್ರತಿ ಹೆಕ್ಟೇರ್ ಗೆ 10,000 ರೂ.ನಂತೆ ಗರಿಷ್ಠ ಎರಡು ಹೆಕ್ಟೇರ್ ಗೆ ಸೀಮಿತಗೊಳಿಸಿ ಸರ್ಕಾರದಿಂದ 223 ಕೋಟಿ ಅನುದಾನ ಘೋಷಿಸಲಾಗಿದ್ದು, ಈ ಪೈಕಿ ಮೊದಲ ಹಂತದಲ್ಲಿ 74 ಕೋಟಿ ಪರಿಹಾರ ಬಿಡುಗಡೆ ಮಾಡಲಾಗಿದೆ. ನಟೆ ರೋಗದಿಂದ ತೊಗರಿ ಬೆಳೆ ಹಾನಿ, ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ನೀಡಲಿದ್ದು, ಉಳಿದ ಮೊತ್ತವನ್ನು ಕೂಡ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read