ಎಐಎಡಿಎಂಕೆ ಕಾರ್ಯಕರ್ತನ ಬರ್ಬರ ಹತ್ಯೆ

ತಮಿಳುನಾಡಿನ ಕಡಲೂರಿನಲ್ಲಿ ಎಐಎಡಿಎಂಕೆ(ಪಳನಿಸ್ವಾಮಿ ಪಕ್ಷದ) ಕಾರ್ಯಕರ್ತನೊಬ್ಬನನ್ನು ಕಡಿದು ಹತ್ಯೆ ಮಾಡಲಾಗಿದೆ. ಪುದುಚೇರಿ ಗಡಿಯಲ್ಲಿ ಈ ಘಟನೆ ನಡೆದಿದೆ.

ಹಲ್ಲೆಗೊಳಗಾದ ವ್ಯಕ್ತಿಯನ್ನು ತಿರುಪಾಪುಲಿಯೂರಿನ ನಿವಾಸಿ ಪದ್ಮನಾಭನ್ ಎಂದು ಗುರುತಿಸಲಾಗಿದ್ದು, ಇವರು ಅಂಗಡಿ ನಡೆಸುತ್ತಿದ್ದರು. ಅವರು ಬಾಗೂರು ಗ್ರಾಮದ ಕಡೆಗೆ ಪ್ರಯಾಣಿಸುತ್ತಿದ್ದಾಗ ಅಪರಿಚಿತರ ಗುಂಪೊಂದು ಹಿಂಬಾಲಿಸಿ ಅವರನ್ನು ಸುತ್ತುವರೆದು ಹತ್ಯೆ ಮಾಡಿ ಪರಾರಿಯಾಗಿದೆ.

ದುಷ್ಕರ್ಮಿಗಳು ತಮ್ಮ ನಾಲ್ಕು ಚಕ್ರದ ವಾಹನವನ್ನು ಪದ್ಮನಾಭನ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಅವರನ್ನು ಕೊಂದು ಹಾಕಿದ್ದಾರೆ. ಪದ್ಮನಾಭನ್ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read