BREAKING NEWS: ಐಶ್ವರ್ಯಾ ಗೌಡಗೆ ಜಾಮೀನು ಮಂಜೂರು

ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಐಶ್ವರ್ಯಾ ಗೌಡಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪಿಎಂಎಲ್ ಎ ಪ್ರಕರಣದಲ್ಲಿ ಬೆಂಗಳೂರಿನ 1ನೇ ಸಿಸಿಹೆಚ್ ನ್ಯಾಯಾಲಯ ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಅನುಸೂಚಿತ ಪ್ರಕರಣವಿಲ್ಲದಿದ್ದರೂ ಇಡಿ ಬಂಧನ ಮಾಡಿದೆ. ಮಹಿಳೆಗೆ ಬಂಧನದಿಂದ ವಿಶೇಷ ವಿನಾಯಿತಿ ಇದೆ ಎಂದು ಐಶ್ವರ್ಯಾ ಗೌಡ ಪರ ವಕೀಲಎಸ್.ಸುನೀಲ್ ಕುಮಾರ್ ವಾದ ಮಂಡಿಸಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಸೆಷನ್ ಕೋರ್ಟ್, ಐಶ್ವರ್ಯಾ ಗೌಡಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಇಡಿ ಮಾಜಿ ಸಂಸದ ಡಿ.ಕೆ.ಸುರೇಶ್ ಗೆ ಸಮನ್ಸ್ ಜಾರಿ ಮಾಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read