ಬೆಂಗಳೂರು : ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದು, ಅಂತೆಯೇ ಇಂದು ಮಾಜಿ ಸಂಸದ ಡಿ.ಕೆ ಸುರೇಶ್ ಇಡಿ ವಿಚಾರಣೆ ಹಾಜರಾಗಿದ್ದಾರೆ.
ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಗೆ ಆಗಮಿಸಿದ ಡಿ.ಕೆ ಸುರೇಶ್ ಎಂಟ್ರಿ ಪುಸ್ತಕಕ್ಕೆ ಸಹಿ ಹಾಕಿ ಒಳಗಡೆ ಹೋಗಿದ್ದಾರೆ.
ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು. ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದರು. ”ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿರುವುದು ನಿಜ. ನೋಟಿಸ್ ಕೊಟ್ಟಿದ್ದಾರೆ ವಿಚಾರಣೆಗೆ ಹಾಜರಾಗುತ್ತೀನಿ. ಇಡಿಯವರು ಏನೇನ್ ಕೇಳ್ತಾರೆ, ಉತ್ತರ ಕೊಡುತ್ತೀನಿ” ಎಂದು ಹೇಳಿದ್ದರು. ಇಡಿ ಅಧಿಕಾರಿಗಳ ಸಂಪೂರ್ಣ ತನಿಖೆಗೆ ನಾನು ಸಹಕಾರ ನೀಡುತ್ತೇನೆ” ಎಂದಿದ್ದರು.