ಬೆಂಗಳೂರು: ಡಿ.ಕೆ.ಸುರೇಶ್ ಸಹೋದರಿ ಎಂದು ಹೇಳಿಕೊಂಡು ಚಿನ್ನ, ಹಣ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ಐಶ್ವರ್ಯಾ ಗೌಡ ಜಾಮೀನು ಮೇಲೆ ಬಿಡುಗಡೆಯಾಗಿದ್ದಾರೆ.
ಇದೀಗ ಐಶ್ವರ್ಯಾ ಗೌಡ ವಿರುದ್ಧದ ಎಲ್ಲಾ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚಿನ್ನ ವಂಚನೆ ಪ್ರಕರಣ, ಹಣ ದುಪ್ಪಟ್ಟು ಮಾಡಿಕೊಡುವುದಾಗಿ ಮೋಸ ಸೇರಿದಂತೆ ಐಶ್ವರ್ಯಾ ಗೌಡ ವಿರುದ್ಧ ಸಾಲು ಸಾಲು ಪ್ರಕರಣಗಳು ದಾಖಲಾಗಿದ್ದು, ಆ ಎಲ್ಲಾ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.