BIG NEWS : ವಾಗ್ಮಿ ‘ಚಕ್ರವರ್ತಿ ಸೂಲಿಬೆಲೆ’ ವಿರುದ್ಧ ತೇಜೋವಧೆ ಆರೋಪ : ದೂರು ದಾಖಲು

ವಾಗ್ಮಿ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ತೇಜೋವಧೆ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಕೆಪಿಸಿಸಿಯ ಸಾಮಾಜಿಕ ಜಾಲತಾಣದ ಉಪಾಧ್ಯಕ್ಷೆ ಸೌಗಂಧಿಕ ರಘುನಾಥ್ ಎಂಬುವವರು ಶಿವಮೊಗ್ಗದ ವಿನೋಬ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಏನಿದು ಘಟನೆ

ಚಂದ್ರಯಾನ 3 ಯಶಸ್ವಿಯಾಗಲು ದೇವರಿಗೆ ಕೈ ಮುಗಿದು ಫೋಟೋ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಮಾಡಿದ ಪೋಸ್ಟಿಗೆ ವಿಜ್ಞಾನಿಗಳ ಶ್ರಮಕ್ಕೆ ಯಶಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ಆದರೆ ಅದನ್ನು ತೋರಿಕೆಗಾಗಿ ಆಗಲಿ ಅಥವಾ ಫೋಟೋಗಾಗಿಯಾಗಲಿ ದೇವರ ಮುಂದೆ ನಿಲ್ಲಬೇಡಿ ಎಂದು ಸೌಗಂಧಿಕ ರಘುನಾಥ್ ಪ್ರತಿಕ್ರಿಯೆ ನೀಡಿದ್ದರು.

ಅದಕ್ಕೆ ಪ್ರತಿಯಾಗಿ ಚಕ್ರವರ್ತಿ ಸೂಲಿಬೆಲೆ ಅವರು ಫೋಟೊ ಹಾಕಿಕೊಂಡರೆ ನಿನಗೆ ಯಾಕೆ ಉರಿ ಎಂದು ಕಾಮೆಂಟ್ಸ್ ಮಾಡಿ ನಂತರ ಡಿಲೀಟ್ ಮಾಡಿದ್ದಾರೆ, ಅಲ್ಲದೇ ಚಕ್ರವರ್ತಿ ಸೂಲಿಬೆಲಿಯವರು ಈ ತರಹದ ಕಮೆಂಟ್ ಮಾಡಿಯೇ ಇಲ್ಲವೆಂದು ಬಿಂಬಿಸಿ ಬೇರೆಯವರಿಂದ ಕಾಮೆಂಟ್ಸ್ ಮಾಡಿಸುತ್ತಿದ್ದಾರೆ . ಸೂಲಿಬೆಲಿಯವರು ಅವಹೇಳನಕಾರಿಯಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಸೌಗಂಧಿಕ ರಘುನಾಥ್ ವಿನೋಬ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read