ಅಕ್ರಮ ಸಂಬಂಧ ಆರೋಪ : ಜೆಡಿಎಸ್ ಮುಖಂಡನಿಗೆ ಹಿಗ್ಗಾಮುಗ್ಗಾ ಥಳಿಸಿದ ಗ್ರಾಮಸ್ಥರು

ಕಲಬುರಗಿ : ಅಕ್ರಮ ಸಂಬಂಧ ಆರೋಪದ ಹಿನ್ನೆಲೆ ಜೆಡಿಎಸ್ ಮುಖಂಡನಿಗೆ ಸಾರ್ವಜನಿಕರು ಧರ್ಮದೇಟು ನೀಡಿದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ನಡೆದಿದೆ.

ಜೆಡಿಎಸ್ ಮುಖಂಡ ವಿಷ್ಣುಕಾಂತ ಮೂಲಗಿ , ಐನೊಳ್ಳಿ ಗ್ರಾಮದ ಮಹಿಳೆ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದನು. ಇದನ್ನು ಹಲವು ಬಾರಿ ನೋಡಿದ ಜನರು ಬೇಸತ್ತಿದರು ಎನ್ನಲಾಗಿದೆ.

ಅನೈತಿಕ ಸಂಬಂಧದಿಂದ ಬೇಸತ್ತ ಜನರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹಣದ ಆಮಿಷ ಒಡ್ಡಿ ಮಹಿಳೆಯನ್ನು ಮನೆಗೆ ಕರೆಸಿಕೊಂಡ ಜೆಡಿಎಸ್ ಮುಖಂಡನನ್ನು ಮನೆಯಿಂದ ಹೊರಕ್ಕೆ ಕರೆದುಕೊಂಡ ಬಂದ ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read