‘ನೀನು ಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಮಾರಾಟ ಆಗ್ಬೇಡ ಎಂದು ಅಂಬೇಡ್ಕರ್ ಹೇಳಿದ್ರು : DCM ಡಿಕೆ ಶಿವಕುಮಾರ್

ಬೆಂಗಳೂರು : ನೀನು ಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಆದ್ರೆ ಮಾರಾಟ ಆಗ್ಬೇಡ” ಅಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ರು. ಆ ಮಾತು ಇಂದಿನ ರಾಜಕೀಯ ಸನ್ನಿವೇಶದಲ್ಲಿ ತುಂಬಾ ಪ್ರಸ್ತುತ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಭಾರತ್ ಜೋಡೋ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಾತನಾಡಿದೆ. “ನೀನು ಹೋರಾಟ ಮಾಡದಿದ್ರೂ ಪರ್ವಾಗಿಲ್ಲ, ಆದ್ರೆ ಮಾರಾಟ ಆಗ್ಬೇಡ” ಅಂತ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ಮಾತು ಹೇಳಿದ್ರು. ಆ ಮಾತು ಇಂದಿನ ರಾಜಕೀಯ ಸನ್ನಿವೇಶದಲ್ಲಿ ತುಂಬಾ ಪ್ರಸ್ತುತ ಎಂದರು.

1976ರಲ್ಲಿ ಇಂದಿರಾಗಾಂಧಿ ಅವರ ಆಡಳಿತದಲ್ಲಿ ಸಂವಿಧಾನದ ಪೀಠಿಕೆಯಲ್ಲಿ ತಿದ್ದುಪಡಿ ತಂದು ಜಾತ್ಯತೀತ ಹಾಗೂ ಸಮಾಜವಾದ ಪದವನ್ನು ಸೇರಿಸಿದ್ದರು. ಆ ಪದಗಳನ್ನು ತೆಗೆಯಲು ಸಾಧ್ಯವಿಲ್ಲ ಎಂದು ನಿನ್ನೆ ಸುಪ್ರೀಂ ಕೋರ್ಟ್ ಹೇಳಿದೆ. ಎಲ್ಲ ಧರ್ಮಗಳಿಗೂ ಒಂದು ಗ್ರಂಥವಿದೆ. ಅದೇ ರೀತಿ ಭಾರತೀಯರಿಗೆ ರಕ್ಷಾ ಕವಚವಾಗಿರುವ ಏಕೈಕ ಗ್ರಂಥ ಎಂದರೆ ಅದು ನಮ್ಮ ಸಂವಿಧಾನ ಎಂದು ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read