ಏ.2 ರಂದು ರಾಜ್ಯಕ್ಕೆ ‘ಅಮಿತ್ ಶಾ’ ಎಂಟ್ರಿ ; ಡಿ.ಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಚುನಾವಣಾ ರಣಕಹಳೆ

ಬೆಂಗಳೂರು : ಏ.2 ರಂದು ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಎಂಟ್ರಿ ಕೊಡಲಿದ್ದು, ಡಿ.ಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.

ಏಪ್ರಿಲ್ 2ರಂದು ಬೆಳಗ್ಗೆ 9 ಗಂಟೆಗೆ ಬಿಜೆಪಿ – ಜೆಡಿಎಸ್ ಪಕ್ಷದ ಪ್ರಮುಖರ ಜತೆ ಅಮಿತ್ ಶಾ ಅವರು ಉಪಾಹಾರವನ್ನು ಸೇವಿಸಲಿದ್ದಾರೆ. ನಂತರ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಸಮಾವೇಶವನ್ನು ನಡೆಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಈ ಸಮಾವೇಶ ನಿಗದಿಯಾಗಿದೆ.

ಮಧ್ಯಾಹ್ನ 3 ಗಂಟೆಗೆ ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಸೇರಿ ಐದು ಕ್ಷೇತ್ರದ ಪ್ರಮುಖರ ಜತೆ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ನಂತರ ಸಂಜೆ 6 ಗಂಟೆಗೆ ಚನ್ನಪಟ್ಟಣದಲ್ಲಿ ಅಮಿತ್ ಶಾ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read