BIG NEWS: ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ನೀಡದಿರುವ ಬಗ್ಗೆ ಅಮಿತ್ ಶಾ ಮಹತ್ವದ ಹೇಳಿಕೆ

ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದರಿಂದ ಯಾವುದೇ ನಷ್ಟವಾಗಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಶೆಟ್ಟರ್ ಅವರಿಗೆ ಮಾತ್ರ ಟಿಕೆಟ್ ಕೈತಪ್ಪಿಲ್ಲ. ಹಲವರಿಗೆ ಟಿಕೆಟ್ ನೀಡಿಲ್ಲ. ಏಕೆ ಟಿಕೆಟ್ ನೀಡುವುದಿಲ್ಲ ಎಂದು ಶೆಟ್ಟರ್ ಅವರಿಗೆ ಹೇಳಿದ್ದೆವು. ಇದನ್ನು ಬಹಿರಂಗಪಡಿಸುವುದಿಲ್ಲ. ಮತದಾರರಿಗೆ ಯಾವ ರೀತಿ ಹೇಳಬೇಕು ಆ ರೀತಿ ವಿಷಯ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಬಿಜೆಪಿ ವೋಟ್ ಬ್ಯಾಂಕ್ ಹೊಂದಿದೆ. ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಈ ಬಾರಿ ಜಗದೀಶ್ ಶೆಟ್ಟರ್ ಸೋಲುತ್ತಾರೆ. ಅವರು ಪಕ್ಷ ಬಿಟ್ಟಿದ್ದರಿಂದ ನಷ್ಟವಾಗಿಲ್ಲ. ಟಿಕೆಟ್ ನೀಡದಿರುವುದೇಕೆ ಎಂದು ಅವರಿಗೆ ಹೇಳಿದ್ದೇವೆ. ಎಲ್ಲಾ ವಿಚಾರವೂ ಶೆಟ್ಟರ್ ಅವರಿಗೆ ಗೊತ್ತಿದೆ. ಕಾರ್ಯಕರ್ತರು ಒಂದಾಗಿದ್ದು ಬಿಜೆಪಿ ಗೆಲ್ಲಲಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read