ಮಂಡ್ಯ ಜಿಲ್ಲೆಯಲ್ಲಿ ಇನ್ನೂ ನಿಲ್ಲದ ಭ್ರೂಣ ಹತ್ಯೆ ದಂಧೆ: ಮತ್ತೊಂದು ಪ್ರಕರಣ ಬೆಳಕಿಗೆ

ಮಂಡ್ಯ: ಮಂಡ್ಯ ಜಿಲ್ಲೆ ಮೇಲುಕೋಟೆ ಹೋಬಳಿಯ ಹೊಸಕೋಟೆ ಗ್ರಾಮದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆದಿದ್ದು, ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಗುರುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಶ್ರೀರಂಗಪಟ್ಟಣ ತಾಲೂಕು ಶೆಟ್ಟಿಹಳ್ಳಿಯ ಮಾಲಾಶ್ರೀ(34) ಅವರಿಗೆ ಹೊಟ್ಟೆ ನೋವು ಮತ್ತು ತೀವ್ರ ರಕ್ತಸ್ರಾವವಾಗಿದ್ದು, ಚಿಕಿತ್ಸೆಗಾಗಿ ತಾಯಿಯ ಜೊತೆಗೆ ಪಾಂಡವಪುರ ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿದ್ದಾರೆ. ವೈದ್ಯರಾದ ಡಾ.ಎಂ.ಕೆ. ಶಿಲ್ಪಾ ಅವರು ತಪಾಸಣೆಯ ವೇಳೆ ರಕ್ತಸ್ರಾವದ ಬಗ್ಗೆ ವಿಚಾರಿಸಿದ್ದಾರೆ.

ಏಪ್ರಿಲ್ 16ರಂದು ಹಿರೇಮರಳಿಯ ಗೀತಾ ಮತ್ತು ಕೆ.ಆರ್. ಪೇಟೆಯ ಶ್ರುತಿ ಎಂಬುವರು ತಮ್ಮನ್ನು ಹೊಸಕೋಟೆ ಗ್ರಾಮದ ಮನೆಯೊಂದಕ್ಕೆ ಕರೆದೊಯ್ದು ಮಾತ್ರೆ ಕೊಟ್ಟು ನುಂಗಲು ಹೇಳಿದ್ದು, ನಂತರ ಗರ್ಭಪಾತವಾಗಿದೆ. ಗರ್ಭಪಾತ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೇತನ್ ಕುಮಾರ್ ಆಶಾ ಶಿವರಾಜ್, ಗೀತಾ ಎಂಬುವರ ಖಾತೆಗಳಿಗೆ ಫೋನ್ ಪೇ ಮೂಲಕ ಹಣ ಹಾಕಲಾಗಿದೆ ಎಂದು ಮಾಲಾಶ್ರೀ ತಿಳಿಸಿದ್ದಾರೆ.

ಕೂಡಲೇ ವೈದ್ಯ ಶಿಲ್ಪಾ ಅವರು ಆಸ್ಪತ್ರೆಯ ಆಡಳಿತಾಧಿಕಾರಿಗೆ ವಿಷಯ ತಿಳಿಸಿದ್ದಾರೆ. ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ ಮಾಹಿತಿ ನೀಡಿದ್ದು, ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳಾದ ಗೀತಾ, ಶ್ರುತಿ, ಚೇತನ್ ಕುಮಾರ್, ಆಶಾ ಶಿವರಾಜ್, ಗರ್ಭಪಾತಕ್ಕೆ ಒಳಗಾದ ಮಾಲಾಶ್ರೀ ಮತ್ತು ಆಕೆಯ ಪತಿ ರವಿಕುಮಾರ್ ವಿರುದ್ಧ ದೂರು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read