BREAKING : ಬೆಂಗಳೂರಿನ ಪಬ್ ನಲ್ಲಿ ಮತ್ತೊಂದು ಅಗ್ನಿ ಅವಘಡ : ಪ್ರಾಣ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು : ಬೆಂಗಳೂರಿನಲ್ಲಿ ಸಾಲು ಸಾಲು ಅಗ್ನಿ ಅವಘಡಗಳು ಸಂಭವಿಸುತ್ತಿದ್ದು, ಬೆಂಗಳೂರಿನ ಪಬ್ ನಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ.

ಕೋರಮಂಗಲದ   ತಾವರೆಕೆರೆ ಮುಖ್ಯ ರಸ್ತೆಯಲ್ಲಿರುವ ಪೋರಂ ಎದುರಿಗಿನ ಕಟ್ಟಡದಲ್ಲಿ ಬೆಂಕಿ ತಗುಲಿದೆ. ಧಗ ಧಗಿಸುತ್ತಿರುವ ಬೆಂಕಿ ಪಬ್ ಪಕ್ಕದ ಕಟ್ಟಡಕ್ಕೂ ಹರಡಿದೆ.  ಬೆಂಕಿ ಹರಡುತ್ತಿದ್ದಂತೆ ವ್ಯಕ್ತಿಯೊಬ್ಬ ಕಟ್ಟಡದಿಂದ ಜಿಗಿದಿದ್ದಾನೆ.  ಈ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

ಅದೃಷ್ಟವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ . ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಹೇಳಲಾಗಿದೆ. ಸದ್ದಗುಂಟೆ ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read