ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು : ರಾಜ್ಯದ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ, 2023ನೇ ಸಾಲಿನ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಉಂಟಾಗುವ ಬೆಳೆ ಹಾನಿಗೆ ನೀಡುವ ಸಬ್ಸಿಡಿಯಲ್ಲಿ ಹೆಚ್ಚಳ ಮಾಡಿದೆ.

ಅರ್ಹ ರೈತರಿಗೆ ಗರಿಷ್ಠ ಎರಡು ಹೆಕ್ಟೇರ್ ಗೆ ಸೀಮಿತವಾಗಿ ಇನ್ಪುಟ್ ಸಬ್ಸಿಡಿ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದ್ದು, ಇದರ ಅನುಸಾರ ಮಳೆಯಾಶ್ರಿತ, ನೀರಾವರಿ ಹಾಗೂ ಬಹು ವಾರ್ಷಿಕ ಬೆಳೆ ನಷ್ಟಕ್ಕೆ ಈ ಹೆಚ್ಚುವರಿ ಸಬ್ಸಿಡಿ ಅನ್ವಯವಾಗಲಿದೆ.

ಮಳೆಯಾಶ್ರಿತ ಬೆಳೆ ನಷ್ಟಕ್ಕೆ ಪ್ರತಿ ಹೆಕ್ಟೇರ್ ಗೆ 5,100 ರೂಪಾಯಿ, ನೀರಾವರಿ ಬೆಳೆ ನಷ್ಟಕ್ಕೆ 8,000 ರೂಪಾಯಿ ಹಾಗೂ ಬಹುವಾರ್ಷಿಕ ಬೆಳೆ ನಷ್ಟಕ್ಕೆ 5,500 ರೂಪಾಯಿ ಇನ್ಪುಟ್ ಸಬ್ಸಿಡಿಯನ್ನು ಹೆಚ್ಚಳ ಮಾಡಲಾಗಿದ್ದು, ಅರ್ಹ ರೈತರು ಎಸ್ ಡಿ ಆರ್ ಎಫ್ / ಎನ್ ಡಿ ಆರ್ ಎಫ್ ಮಾರ್ಗಸೂಚಿಯಲ್ಲಿ ನಿಗದಿಪಡಿಸಿರುವ ದರಕ್ಕಿಂತ ಹೆಚ್ಚುವರಿ ಮೊತ್ತ ಪಡೆಯಲು ಷರತ್ತನ್ನು ವಿಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read