ನವದೆಹಲಿ : ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಮತ್ತೊಂದು ಮೈಲಿಗಲ್ಲುಎಂದು ಪ್ರಧಾನಿ ಮೋದಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸಾಧನೆ ಕೊಂಡಾಡಿ ಟ್ವೀಟ್ ಮಾಡಿದ್ದಾರೆ.
”ತಮ್ಮ ಐತಿಹಾಸಿಕ ಬಾಹ್ಯಾಕಾಶ ಯಾತ್ರೆಯಿಂದ ಭೂಮಿಗೆ ಮರಳುತ್ತಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರನ್ನು ಸ್ವಾಗತಿಸಲು ನಾನು ದೇಶದೊಂದಿಗೆ ಸೇರುತ್ತೇನೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿ ನೀಡಿದ ಭಾರತದ ಮೊದಲ ಗಗನಯಾತ್ರಿಯಾಗಿ, ಅವರು ತಮ್ಮ ಸಮರ್ಪಣೆ, ಧೈರ್ಯ ಮತ್ತು ಪ್ರವರ್ತಕ ಮನೋಭಾವದ ಮೂಲಕ ಶತಕೋಟಿ ಕನಸುಗಳಿಗೆ ಸ್ಫೂರ್ತಿ ನೀಡಿದ್ದಾರೆ. ಇದು ನಮ್ಮದೇ ಆದ ಮಾನವ ಬಾಹ್ಯಾಕಾಶ ಹಾರಾಟ ಮಿಷನ್ – ಗಗನಯಾನಕ್ಕೆ ಮತ್ತೊಂದು ಮೈಲಿಗಲ್ಲನ್ನು ಸೂಚಿಸುತ್ತದೆ” ಎಂದಿದ್ದಾರೆ.
18 ದಿನಗಳ ಬಾಹ್ಯಾಕಾಶ ಯಾನ ಮುಗಿಸಿ ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾನಿಗಳು ಭೂಮಿಗೆ ಬಂದಿಳಿದಿದ್ದಾರೆ. ಮಧ್ಯಾಹ್ನ 3 ಗಂಟೆ 2 ನಿಮಿಷಕ್ಕೆ ಕ್ಯಾಲಿಫೋರ್ನಿಯಾದ ಕರಾವಳಿ ಪ್ರದೇಶಕ್ಕೆ ನೌಕೆ ಬಂದಿಳಿದಿದೆ. ಭಾರತೀಯ ಗ್ರೂಪ್ ಕ್ಯಾ. ಶುಭಾಂಶು ಶುಕ್ಲಾ, ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್ ನ ಮಿಷನ್ ಸ್ಪೆಷಲಿಸ್ಟ್ ಸ್ಲಾವೋಸ್ಜ್ ಉಜ್ನಾನ್ಸ್ಕಿ, ಹಂಗೇರಿಯಾದ ಗಗನಯಾನಿ ಟಿಬೋರ್ ಕಾಪು ಅವರು ಭೂಮಿ ಮೇಲೆ ಲ್ಯಾಂಡ್ ಆಗಿದ್ದಾರೆ.
I join the nation in welcoming Group Captain Shubhanshu Shukla as he returns to Earth from his historic mission to Space. As India’s first astronaut to have visited International Space Station, he has inspired a billion dreams through his dedication, courage and pioneering…
— Narendra Modi (@narendramodi) July 15, 2025