BREAKING : ಬೆಂಗಳೂರಿನಲ್ಲಿ ಕಿಲ್ಲರ್ ‘BBMP’ ಲಾರಿಗೆ ಮತ್ತೊಂದು ಬಲಿ, ಸ್ಥಳದಲ್ಲೇ ಪಾದಚಾರಿ ವೃದ್ದೆ ಸಾವು..!

ಬೆಂಗಳೂರು : ಕಿಲ್ಲರ್ ಬಿಬಿಎಂಪಿ ಲಾರಿಗೆ ಮತ್ತೊಂದು ಬಲಿಯಾಗಿದ್ದು, ಪಾದಚಾರಿ ವೃದ್ದೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಆಂಧ್ರಪ್ರದೇಶ ಮೂಲದ ಆದಿಲಕ್ಷ್ಯಮ್ಮ (69) ಎಂದು ಗುರುತಿಸಲಾಗಿದೆ.

ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಕುಮಾರಸ್ವಾ,ಮಿ ಲೇಔಟ್ ಜಂಬೂಸವಾರಿ ದಿಣ್ಣೆ ಬಳಿ ವೃದ್ದೆ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಕಸದ ಟಿಪ್ಪರ್ ಲಾರಿ ವೃದ್ದೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವೃದ್ದೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿಪ್ಪರ್ ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read