BREAKING : ರಾಜ್ಯದಲ್ಲಿ ಪತ್ನಿ ಕಾಟಕ್ಕೆ ಮತ್ತೊಂದು ಬಲಿ : ಬೆಳಗಾವಿಯಲ್ಲಿ ‘ಡೆತ್ ನೋಟ್’ ಬರೆದಿಟ್ಟು ಪತಿ ಆತ್ಮಹತ್ಯೆ.!

ಬೆಂಗಳೂರು : ರಾಜ್ಯದಲ್ಲಿ ಪತ್ನಿ ಕಾಟಕ್ಕೆ ಮತ್ತೊಂದು ಬಲಿಯಾಗಿದ್ದು, ಹೆಂಡತಿ ಕಾಟಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಅನಗೋಳ ದುರ್ಗಾ ಕಾಲೋನಿಯಲ್ಲಿ ನಡೆದಿದೆ.

ಮೃತನನ್ನು ಸುನೀಲ್ ಮೂಲಿಮನಿ (33) ಎಂದು ಗುರುತಿಸಲಾಗಿದೆ. ಕಂಪ್ಯೂಟರ್ ಶಾಪ್ ನಡೆಸುತ್ತಿದ್ದ ಸುನೀಲ್ ಮೂಲಿಮನಿ ವೈಯರ್ ನಿಂದ ನೇಣು ಬಿಗಿದುಕೊಂಡು ಸೂಸೈಡ್ ಮಾಡಿಕೊಂಡಿದ್ದಾನೆ. 4 ವರ್ಷದ ಹಿಂದೆ ಪೂಜಾ ಎಂಬುವವರನ್ನು ಸುನೀಲ್ ಮದುವೆಯಾಗಿದ್ದರು. ಅಲ್ಲದೇ ಮಗು ಕೂಡ ಇತ್ತು. ನನ್ನ ಸಾವಿಗೆ ನನ್ನ ಹೆಂಡತಿ ಕಾರಣ ಎಂದು ಡೆತ್ ನೋಟ್ ಬರೆದಿಟ್ಟಿದ್ದಾನೆ. ಘಟನೆ ಸಂಬಂಧ ಉದ್ಯಮಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ಕಾಟಕ್ಕೆ ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸೂಸೈಡ್ ಮಾಡಿಕೊಂಡಿದ್ದರು. ಈ ಪ್ರಕರಣ ರಾಜ್ಯದಲ್ಲಿ ಭಾರಿ ಸುದ್ದಿಯಾಗಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read