ಅನ್ನದಾತರಿಗೆ ಕಗ್ಗತ್ತಲ ‘ದೀಪಾವಳಿ ಗ್ಯಾರೆಂಟಿ’ ನೀಡಿದ ಕಾಂಗ್ರೆಸ್ ಸರ್ಕಾರ : R.ಆಶೋಕ್ ವಾಗ್ಧಾಳಿ

ಬೆಂಗಳೂರು : ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರೆಂಟಿ ನೀಡಿದ ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ನಾಯಕ ಆರ್. ಆಶೋಕ್ ವಾಗ್ಧಾಳಿ ನಡೆಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಆರ್. ಆಶೋಕ್ ”ಅನ್ನದಾತರಿಗೆ ಕಗ್ಗತ್ತಲ ದೀಪಾವಳಿ ಗ್ಯಾರೆಂಟಿ ನೀಡಿದ ರೈತವಿರೋಧಿ ಕಾಂಗ್ರೆಸ್ ಸರ್ಕಾರ! ನೆರೆಪೀಡಿತ ಪ್ರದೇಶಗಳಲ್ಲಿ ಕಾಟಾಚಾರದ ವೈಮಾನಿಕ ಸಮೀಕ್ಷೆ ಮಾಡಿ ಕೈತೊಳೆದುಕೊಂಡ ಸಿಎಂ ಸಿದ್ದರಾಮಯ್ಯ ಸರ್ಕಾರ, ಲಕ್ಷಾಂತರ ರೈತ ಕುಟುಂಬಗಳು ಈ ದೀಪಾವಳಿಯನ್ನು ಕಗ್ಗತ್ತಲಲ್ಲಿ ಕಳೆಯುವ ದುಸ್ಥಿತಿಗೆ ದೂಡಿದೆ”.

ಒಂದು ಕಡೆ ಕೇಂದ್ರ ಸರ್ಕಾರದ ಜಿಎಸ್ಟಿ ದರ ಇಳಿಕೆಯಿಂದ ಜನಸಾಮಾನ್ಯರು ತಮಗೆ ಇಷ್ಟವಾದ ವಸ್ತುಗಳನ್ನು ಕೊಳ್ಳುವ ಮೂಲಕ ಸಂತೋಷದಿಂದ ದೀಪಾವಳಿ ಹಬ್ಬಕ್ಕಾಗಿ ಕಾಯುತ್ತಿದ್ದರೆ, ಮತ್ತೊಂದು ಕಡೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಕರ್ನಾಟಕ ಭಾಗದ ನೆರೆಪೀಡಿತ ರೈತರು ಪರಿಹಾರಕ್ಕಾಗಿ ಕಾದೂ ಕಾದು ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ಎದುರಾಗಿದೆ. ಈ ರೈತವಿರೋಧಿ ಕಾಂಗ್ರೆಸ್ ಪಕ್ಷಕ್ಕೆ ಅನ್ನದಾತರ ಶಾಪ ತಟ್ಟದೇ ಇರದು ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read