ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ : ಪ್ರಸಕ್ತ (2023-24) ಸಾಲಿಗೆ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ (ಪಿಯುಸಿ, ಡಿಪ್ಲೋಮ, ಪದವಿ, ಎಂಜಿನಿಯರಿಂಗ್, ವೃತ್ತಿಪರ ಕೋರ್ಸ್, ಸ್ನಾತಕೋತ್ತರ ಮತ್ತು ಪಿಯುಸಿ ನಂತರದ ಇತರೆ ಕೋರ್ಸುಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸಂಬಂಧಿಸಿದಂತೆ ಎಸ್ಎಸ್ಪಿ ಪೋರ್ಟಲ್ https://ssp.karnataka.gov.in ಮತ್ತು https://dom.karnataka.gov.in ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಕೂಡಲೇ ಇದರ ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಸಲು ಜನವರಿ, 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಮೌಲಾನಾ ಆಜಾದ್ ಭವನ, ಎಫ್ಎಂಸಿ ಕಾಲೇಜು ಹತ್ತಿರ, ಮಡಿಕೇರಿ ಇವರನ್ನು ಹಾಗೂ ಕಚೇರಿ ದೂ.ಸಂ. 08272-225528, ಮಾಹಿತಿ ಕೇಂದ್ರ, ಮಡಿಕೇರಿ 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಬಿ.ಎಂ.ದಿವಾಕರ ಅವರು ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read