ಗಮನಿಸಿ : ಮೀನುಗಾರಿಕೆ ಇಲಾಖೆಯಿಂದ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಶಿವಮೊಗ್ಗ :” ಮೀನುಗಾರಿಕೆ ಇಲಾಖೆ ವತಿಯಿಂದ 2023-24 ನೇ ಸಾಲಿಗೆ ಮರುಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸ್ಯಸಂಪದ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪೆನ್ ಕಲ್ಚರ್ ಇನ್ ಓಪೆನ್ ವಾಟರ್ಸ್ 5.20 ಹೆಕ್ಟೇರ್ – ಸಾಮಾನ್ಯ 1.20 ಹೆಕ್ಟೇರ್, ಮಹಿಳೆ 2.0 ಹೆಕ್ಟೇರ್ ಮತ್ತು ಪರಿಶಿಷ್ಟ ಜಾತಿ 2.0 ಹೆಕ್ಟೇರ್.ಹಿತ್ತಲ ಮಿನಿ ಆರ್‍ಎಎಸ್ ಒಟ್ಟು 02 ಘಟಕಗಳು – ಸಾಮಾನ್ಯ 01 ಮತ್ತು ಮಹಿಳೆ 01. ಮತ್ತು ಹಿತ್ತಲ ಅಲಂಕಾರಿಕ ಮೀನುಕೃಷಿ ಘಟಕಗಳು ಒಟ್ಟು 02 – ಸಾಮಾನ್ಯ 02.ಸಹಾಯಧನ ಘಟಕಗಳ ಉಪಯೋಜನೆಗಳನ್ನು ಪಡೆಯಲು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ.40 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಮಹಿಳಾ ಫಲಾನುಭವಿಗಳಿಗೆ ಶೇ.60 ರಷ್ಟು ಸಹಾಯಧನ ನೀಡಲಾಗುತ್ತದೆ.

ಆಸಕ್ತರು ಅ.31 ರೊಳಗೆ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದೆಂದು ಶಿವಮೊಗ್ಗ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read