ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಿಂದ ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಯಡಿ (4.1) ಹಿತ್ತಲಿನ ಅಲಂಕಾರಿಕ ಮೀನು ಸಾಕಾಣಿಕೆ ಘಟಕ. (5.4) ಬ್ಯಾಕ್ಯಾರ್ಡ್ ಮಿನಿ ಆರ್ಎಎಸ್ ಘಟಕಗಳ ಸ್ಥಾಪನೆ. (1.4)ಹೊಸಮೀನು ಕೃಷಿ ಕೊಳ ನಿರ್ಮಾಣ(ಪ.ಜಾತಿ). (11.2) ಸಾಂಪ್ರದಾಯಿಕ ಮೀನುಗಾರರಿಗೆ ಯಾಂತ್ರಿಕೃತ ಎಫ್ಆರ್ಪಿ ದೋಣಿಗಳು ಖರೀದಿಗೆ ಸಹಾಯಧನ. ಯೋಜನೆಗಳನ್ನು ಅನುಷ್ಠಾನಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ. ಈ ಉಪ ಯೋಜನೆ ಪ್ರಾರಂಭಿಸಲು ಶೇ.40 ರಷ್ಟು ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಮತ್ತು ಶೇ.60 ರಷ್ಟು ಪ.ಜಾತಿ/ ಪ.ಪಂಗಡ/ ಮಹಿಳಾ ಫಲಾನುಭವಿಗಳಿಗೆ ಸಹಾಯಧನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಮಡಿಕೇರಿ, ಪೊನ್ನಂಪೇಟೆ ಮತ್ತು ಸೋಮವಾರಪೇಟೆ ಅವರನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಸಚಿನ್ ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read