ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನ

ಬಳ್ಳಾರಿ : ರೇಷ್ಮೆ ಇಲಾಖೆಯಿಂದ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ರೇಷ್ಮೆ ಇಲಾಖೆಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಅ.31 ರೊಳಗಾಗಿ ಅರ್ಜಿಯನ್ನು ಕಚೇರಿಗೆ ಸಲ್ಲಿಸಬೇಕು ಎಂದು ರೇಷ್ಮೆ ಕೃಷಿ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

*ಪ್ರಶಸ್ತಿಗಾಗಿ ರೇಷ್ಮೆ ಬೆಳೆಗಾರರ ಅರ್ಹತೆಗಳು:

ಕನಿಷ್ಠ 1 ಎಕರೆ ಹಿಪ್ಪನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು, 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು, ರೇಷ್ಮೆ ಬೆಳೆಗಾರರು ರೇಷ್ಮೆ ಪಾಸ್ಬುಕ್, ರೇಷ್ಮೆ ಮೊಟ್ಟೆ/ಬಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.

ಅರ್ಹತೆ ಹೊಂದಿರುವ ರೇಷ್ಮೆ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಿ ಅಗತ್ಯ ಮಾಹಿತಿಯನ್ನು ಪಡೆದು ಅಗತ್ಯ ದಾಖಾಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಅ.31 ರೊಳಗೆ ಕಚೇರಿಗೆ ನೀಡಬೇಕು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read