ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2025-26ನೇ ಸಾಲಿನ ವಿವಿಧ ಯೋಜನೆಯಡಿ ಸಹಾಯಧನ ಪಡೆದುಕೊಳ್ಳಲು ಆಸಕ್ತ ರೈತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾಂಶ ಬಾಳೆ, ತರಕಾರಿ, ಕಾಳು ಮೆಣಸು, ಗೋಡಂಬಿ, ಹೂವಿನ ಬೆಳೆಗಳ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ (weed Mat) , ಮಿನಿ ಟ್ರಾಕ್ಟರ್ (up to 20 pto hp), ಫಾರಂ ಗೇಟ್, ಪ್ರಾಥಮಿಕ ಸಂಸ್ಕರಣಾ ಘಟಕ, ಪ್ಯಾಕ್ ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ. ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ (ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕ್ಯೊಯಲು ಸಹಾಯ ಧನ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಕೆ. ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಕಾಳುಮೆಣಸು ಪ್ರದೇಶ ವಿಸ್ತರಣೆ, ಕೇಂದ್ರ ಪುರಸ್ಕೃತ ಯೋಜನೆಯಾದ ಕೃಷಿ ವಿಸ್ತರಣೆ ಮತ್ತು ತರಬೇತಿ ಅಭಿಯಾನ ಯೋಜನೆಯಡಿ ಮತ್ತು ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಯೋಜನೆಯಡಿ ಅಡಿಕೆ ಸಿಪ್ಪೆ ಸುಲಿಯುವ ಯಂತ್ರ, ತೆಂಗಿನ ಮರ ಹತ್ತುವ ಯಂತ್ರ, ಕಳೆ ಕೊಚ್ಚುವ ಯಂತ್ರ, ಟ್ರಾಕ್ಟರ್ ಟ್ರೈಲರ್ ಮತ್ತು ಇನ್ನಿತರ ಯಂತ್ರೋಪಕರಣಗಳಿಗೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಪ್ಲಾಸ್ಟಿಕ್ ಕ್ರೇಟ್, ಹಣ್ಣು ಮಾಗಿಸುವ ಘಟಕ, ಸೋಲಾರ್ ಪಂಪ್ ಸೇಟ್, ಲಘು ಪೋಷಕಾಂಶಗಳ ಮಿಶ್ರಣ / ಬೆಳೆ ಸ್ಪೇಷಲ್ ಸಹಾಯಧನ, ರಾಜ್ಯವಲಯ ಯೋಜನೆ ಹಾಗೂ ಜಿಲ್ಲಾ ಪಂಚಾಯತ್ ಯೋಜನೆ ವತಿಯಿಂದ ಜೇನು ಪೆಟ್ಟಿಗೆ ಸ್ಟ್ಯಾಂಡ್ ಹಾಗೂ ಜೇನು ಕುಟುಂಬಕ್ಕೆ ಸಹಾಯಧನ ಪಡೆದುಕೊಳ್ಳುವುದು.

ಆಸಕ್ತ ರೈತರು ಅರ್ಜಿಯನ್ನು ಆಯಾ ರೈತ ಸಂಪರ್ಕ ಕೇಂದ್ರದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜುಲೈ 5 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಜಿ.ಪಂ. ಭದ್ರಾವತಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಮತ್ತು ಭದ್ರಾವತಿ ತೋಟಗಾರಿಕೆ ಕಛೇರಿ ಹಾಗೂ ದೂ.ಸಂ. 08282-295029 ನ್ನು ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read