ಜೈನ ಬಸದಿಗಳ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ : ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿ ಹಾಗೂ ತಾಲೂಕು ಮಾಹಿತಿ ಕೇಂದ್ರಗಳಿAದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಬಸದಿ ನೋಂದಣಿ ಪ್ರತಿ, ಆಡಳಿತ ಮಂಡಳಿಯ ಪ್ರತಿ, ಅರ್ಚಕರುಗಳ ಭಾವಚಿತ್ರ, ಕಳೆದ ಮೂರು ವರ್ಷಗಳಲ್ಲಿ ವಾಸವಿರುವ ಬಗ್ಗೆ ದಾಖಲೆ, ಅರ್ಚಕರ ಬ್ಯಾಂಕ್ ಖಾತೆ ವಿವರ, ಅರ್ಚಕರುಗಳ ಆಧಾರ್ ಕಾರ್ಡ್ ಪ್ರತಿ, ಮಾಹೆವಾರು ಕರ್ತವ್ಯದ ಹಾಜರಾತಿ, ಸೇವಾ ದೃಢೀಕರಣ ಪತ್ರ, ಧಾರ್ಮಿಕ ವಿದ್ಯಾರ್ಹತೆ ಕುರಿತು ಅಗತ್ಯ ದಾಖಲೆ, 200/- ರೂ.ಗಳ ಛಾಪಾ ಕಾಗದದಲ್ಲಿ ಪ್ರಮಾಣ ಪತ್ರಗಳನ್ನು ಲಗತ್ತಿಸಿ ಜೂ. 16 ರಿಂದ 30ರೊಳಗಾಗಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ 1 ನೆ ಮಹಡಿ, ಸತ್ಯ ಶ್ರೀ ಆರ್ಕೆಡ್, 5ನೇ ಪ್ಯಾರಲಾಲ್ ರಸ್ತೆ, ದುರ್ಗಿಗುಡಿ ದೂ.ಸಂ.08182-220206, ಅಲ್ಪಸಂಖ್ಯಾತರ ಇಲಾಖೆಯ ಮಾಹಿತಿ ಕೇಂದ್ರಗಳ ಸಂಪರ್ಕ ಸಂಖ್ಯೆಗಳು ಶಿವಮೊಗ್ಗ – 7676888388, ಭದ್ರಾವತಿ- 9538853680, ತೀರ್ಥಹಳ್ಳಿ -.8861982835, ಸೊರಬ – 9513815513, ಶಿಕಾರಿಪುರ – 7829136724, ಹೊಸನಗರ – 9008447029, ಸಾಗರ -7338222907 ಇವರುಗಳನ್ನು ಸಂಪರ್ಕಿಸುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read