ಶಿವಮೊಗ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯ ಯುವನೀತಿ 2012 ಅನುಷ್ಠಾನದಡಿಯಲ್ಲಿ ನಮ್ಮೂರ ಶಾಲೆಗೆ ನಮ್ಮ ಯುವಜನರು ಯೋಜನೆಯನ್ನು ಮತ್ತೊಮ್ಮೆ ಜಾರಿಗೆ ತರಲಾಗಿದ್ದು, ಆಸಕ್ತ ಶಾಲೆಗಳಿಂದ ಪ್ರಸ್ತಾವನೆ/ ಅರ್ಜಿ ಆಹ್ವಾನಿಸಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹವಾಗಿ ತಲಾ ರೂ. 1.00 ಲಕ್ಷದಂತೆ ಸರ್ಕಾರದಿಂದ ಪ್ರೋತ್ಸಾಹಧನವನ್ನು ನೀಡಲು ತೀರ್ಮಾನಿಸಿದ್ದು, ಈ ಅನುದಾನದಲ್ಲಿ ರೂ. 10,000/-ಗಳನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಮತ್ತು ರೂ. 90,000/-ಗಳನ್ನು ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಗ್ರಿಗಳ ಖರೀದಿಸಬೇಕಾಗಿರುತ್ತದೆ.
ಆಸಕ್ತ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಶಾಲೆಗಳು 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿದ ಜಿಲ್ಲೆಯ ಸರ್ಕಾರಿ ಶಾಲೆಯವರು ಪ್ರಸ್ತಾವನೆಯನ್ನು ಜೂ. 25 ರೊಳಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ, ಶಿವಮೊಗ್ಗ ಸಲ್ಲಿಸುವಂತೆ ಇಲಾಖೆ ಸಹಾಯಕ ನಿರ್ದೆಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.: 9900280416 ನ್ನು ಸಂಪರ್ಕಿಸುವುದು.