ಧಾರವಾಡ ಜಿಲ್ಲೆಯ ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಚೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಡಾಟಾ ಎಂಟ್ರಿ ಆಪರೇಟರ್ ರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ.
ಹೆಚ್ಚಿನ ಮಾಹಿತಿಗಾಗಿ https://kppp.karnataka.gov.inನಲ್ಲಿ ಹಾಗೂ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿ ಅಟಲ್ಜೀ ಜನಸ್ನೇಹಿ ಕೇಂದ್ರದ ಶಾಖೆಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
