‘ದೀಕ್ಷಾ’ ಭೂಮಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಂದ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆ : ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24 ನೇ ಸಾಲಿನಲ್ಲಿ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿಗೆ ಭೇಟಿ ನೀಡಲು ಯಾತ್ರಾರ್ಥಿಗಳಿಗೆ ಬಸ್ಸುಗಳ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಕಲ್ಪಿಸಲಾಗಿದ್ದು, ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಯಾತ್ರಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಆಸಕ್ತ ಯಾತ್ರಾರ್ಥಿಗಳು www.sw.kar.nic.in ವೆಬ್ ಸೈಟ್ ನಲ್ಲಿ ಆಕ್ಟೋಬರ್ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ದಕ್ಷಿಣ ತಾಲ್ಲೂಕು, ಎಸ್. ಕರಿಯಪ್ಪ ರಸ್ತೆ, ಕನಕಪುರ ಮುಖ್ಯರಸ್ತೆ, ಬನಶಂಕರಿ, ಬೆಂಗಳೂರು -70 ಅಥವಾ ದೂರವಾಣಿ ಸಂಖ್ಯೆ 080-26711096 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ದಕ್ಷಿಣ ತಾಲ್ಲೂಕು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read