ಏಪ್ರಿಲ್ 5 ರ ಬದಲು 9 ರಂದು ಕೋಲಾರಕ್ಕೆ ರಾಹುಲ್ ಗಾಂಧಿ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 5 ರ ಬದಲಿಗೆ ಏ. 9 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದಾರೆ.

ಏ. 5 ರಂದು ಕೋಲಾರದಲ್ಲಿ ನಡೆಯಬೇಕಿದ್ದ ಕಾಂಗ್ರೆಸ್ ಸತ್ಯಮೇವ ಜಯತೇ ಸಮಾವೇಶ ಏಪ್ರಿಲ್ 9 ರಂದು ನಡೆಯಲಿದೆ. ರಾಹುಲ್ ಗಾಂಧಿ ಕೋಲಾರ ಭೇಟಿ ಹಿನ್ನೆಲೆಯಲ್ಲಿ ಕರೆದಿದ್ದ ಪೂರ್ವ ಭಾವಿ ಸಭೆ ಮೊಟಕುಗೊಳಿಸಲಾಗಿದ್ದು, ಮತ್ತೆ ಸಭೆಗೆ ದಿನ ನಿಗದಿ ಮಾಡಲಾಗುವುದು.

ಕಳೆದ ಚುನಾವಣೆಯಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಮೋದಿ ಸರ್ ನೇಮ್ ಕುರಿತಾಗಿ ನೀಡಿದ ಹೇಳಿಕೆಯಿಂದ ಶಿಕ್ಷೆಗೆ ಗುರಿಯಾಗಿ ಲೋಕಸಭಾ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಹೀಗಾಗಿ ಕೋಲಾರದಿಂದಲೇ ಅವರು ಹೋರಾಟ ಪ್ರಾರಂಭಿಸಲಿದ್ದಾರೆ. ಸತ್ಯಮೇವ ಜಯತೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಜೊತೆಗೆ ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಲಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read