ಬಿಜೆಪಿಯಿಂದ ಸಿಗದ ಬಿ ಫಾರಂ; ನಾಮಪತ್ರ ತಿರಸ್ಕೃತ; ಪಕ್ಷೇತರ ಸ್ಪರ್ಧೆಗೆ ಗ್ರೀನ್ ಸಿಗ್ನಲ್

ಹಾಸನ: ಹಾಸನ ಜಿಲ್ಲೆ ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಅವರ ನಾಮಪತ್ರ ತಿರಸ್ಕೃತವಾಗಿದೆ. ಅರಕಲಗೂಡು ಕ್ಷೇತ್ರದ ಅಭ್ಯರ್ಥಿ ಕೃಷ್ಣೇಗೌಡ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿ ಎಂದು ನಾಮಪತ್ರ ಸಲ್ಲಿಸಿದ್ದರು.

ಬಿಜೆಪಿಯಿಂದ ಬಿ ಫಾರಂ ಸಿಗದ ಕಾರಣ ನಾಮಪತ್ರ ತಿರಸ್ಕಾರಗೊಂಡಿದೆ. ಅಧಿಕೃತವಾಗಿ ಯೋಗಾ ರಮೇಶ್ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದರು.

ನಂತರದಲ್ಲಿ ಕೃಷ್ಣೇಗೌಡರಿಗೆ ಇಮೇಲ್ ಮೂಲಕ ಬಿ ಫಾರಂ ಕಳಿಸಲಾಗಿದೆ. ಅಧಿಕೃತ ಅಭ್ಯರ್ಥಿ ಬದಲು ಪಕ್ಷೇತರ ಅಭ್ಯರ್ಥಿಗೆ ಬಿಜೆಪಿ ಬಿ, ಸಿ ಫಾರಂ ನೀಡಿದೆ ಎನ್ನಲಾಗಿತ್ತು.

ಕೃಷ್ಣೇಗೌಡ ಬಿಜೆಪಿ ಅಭ್ಯರ್ಥಿ ನಾಮಪತ್ರ ತಿರಸ್ಕೃತವಾಗಿದ್ದು, ಪಕ್ಷೇತರ ಅಭ್ಯರ್ಥಿಯಾಗಿ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read