ತೀರ್ಥಹಳ್ಳಿ : ಅರಳಸುರಳಿ ಕುಟುಂಬದ ಸಜೀವ ದಹನ ಕೇಸ್, ಮೂವರ ವಿರುದ್ಧ ‘FIR’ ದಾಖಲು

ತೀರ್ಥಹಳ್ಳಿ ತಾಲೂಕಿನ ಅರಳಸುರಳಿಯಲ್ಲಿ ಒಂದೇ ಕುಟುಂಬದ ಮೂವರು ಸಜೀವವಾಗಿ ದಹನಗೊಂಡಿರುವ ಘಟನೆಗೆ ಸಂಬಂಧಿಸಿದಂತೆ ಮೂವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ರಾಘವೇಂದ್ರ ಪತ್ನಿ ಸಹೋದರನ ಹೇಳಿಕೆ ಮೇಲೆ ಎಫ್ ಐ ಆರ್ ದಾಖಲಾಗಿದೆ. ಡಾ.ಸುದೀಂದ್ರ, ಪಾರಾ ಕೃಷ್ಣಮೂರ್ತಿ ಮತ್ತು ರಾಘವೇಂದ್ರ ಅವರ ನಾದಿನಿ ವಿನೋದ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಮೀನಿನ ವಿಚಾರಕ್ಕೆ ರಾಘವೇಂದ್ರ ಕುಟುಂಬ ಹಾಗೂ ಈ ಮೂವರು ನಡುವೆ ಗಲಾಟೆ ನಡೆದಿದೆ ಎಂದು ಹೇಳಲಾಗಿದೆ.

ಬೆಂಕಿ ಹಚ್ಚಿಕೊಂಡು ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್(30) ಇನ್ನೊಬ್ಬ ಪುತ್ರ ಭರತ್ (28) ಮೃತಪಟ್ಟಿದ್ದರು. ಇತ್ತೀಚೆಗೆ ಮನೆಯ ಕೋಣೆಯಲ್ಲಿ ಕಟ್ಟಿಗೆ ಸಂಗ್ರಹಿಸಿಟ್ಟಿದ್ದರು. ಅದಕ್ಕೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read