ಕೇಂದ್ರದ ನಿರ್ದೇಶನದಂತೆ ಪಡಿತರ ಚೀಟಿದಾರರ ಶೇ. 100ರಷ್ಟು ಆಧಾರ್ ಸೀಡಿಂಗ್, ಇ-ಕೆವೈಸಿ ಕಡ್ಡಾಯ: ಆಹಾರ ಇಲಾಖೆ ಮಹತ್ವದ ಸೂಚನೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ NFSA 2013  ಅಡಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನಗಳನ್ವಯ ಶೇ.100 ರಷ್ಟು ಪಡಿತರ ಚೀಟಿದಾರರ Aadhar seeding ಮತ್ತು ಇ-ಕೆವೈಸಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸೂಚಿಸಿರುತ್ತಾರೆ.

ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಕಾರ್ಯ ಮಾಡುತ್ತಿದ್ದು, ಜಿಲ್ಲೆಯಲ್ಲಿನ ಅಂತ್ಯೋದಯ ಪಡಿತರ ಚೀಟಿದಾರರು ಹಾಗೂ ಆದ್ಯತಾ ಪಡಿತರ ಚೀಟಿದಾರರಲ್ಲಿ ಈವರೆಗೂ ಇ-ಕೆವೈಸಿ ಮಾಡಿಸದೇ ಇರುವ ಸದಸ್ಯರು ಮಾತ್ರ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಕಡ್ಡಾಯವಾಗಿ ಸದರಿ ದಿನಾಂಕದೊಳಗಾಗಿ ಇ-ಕೆವೈಸಿ ಮಾಡಿಸುವಂತೆ ಹಾಸನ ಜಿಲ್ಲೆಯ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read