BIG NEWS: ಕಾಂಗ್ರೆಸ್ ನಿಂದ ಕೆಲವರ ಬ್ಲ್ಯಾಕ್ ಮೇಲ್; ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದ ಶಾಸಕ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಶಾಸಕ ಬಿ.ಸಿ.ಪಾಟೀಲ್, ಮಾಜಿ ಶಾಸಕ ರಾಜು ಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ, ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯದವರಿರುತ್ತಾರೆ. ಭೇಟಿಯಾದ ಮಾತ್ರಕ್ಕೆ ಆಪರೇಷನ್ ಹಸ್ತ ಎಂಬ ರೀತಿ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

ಕಾಂಗ್ರೆಸ್ ಮುಳುಗುವ ಹಡಗು. ಆ ಪಕ್ಷಕ್ಕೆ ಭವಿಷ್ಯವಿಲ್ಲ. ಕಾಂಗ್ರೆಸ್ ನವರು ಕೆಲವರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬ್ಲ್ಯಾಕ್ ಮೇಲ್ ವಿಫಲವಾಗುತ್ತದೆ ಎಂದು ಕಿಡಿಕಾರಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read