BREAKING : ಸಚಿವ ‘ಜಮೀರ್ ಅಹ್ಮದ್’ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಯತ್ನ : ರೂಪೇಶ್ ರಾಜಣ್ಣ ಹಾಗೂ ಬೆಂಬಲಿಗರು ಪೊಲೀಸ್ ವಶಕ್ಕೆ.!

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ರೂಪೇಶ್ ರಾಜಣ್ಣ ಹಾಗೂ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರ ಮೇಲೆ ಸರ್ಫರಾಜ್ ಖಾನ್ ಗಂಭೀರ ಆರೋಪ ಮಾಡಿದ್ದರು. ಆದ್ದರಿಂದ ರೂಪೇಶ್ ರಾಜಣ್ಣ ಅವರು ಸರ್ಫರಾಜ್ ಖಾನ್ ಆರೋಪಕ್ಕೆ ದಾಖಲೆ ಕೇಳಲು ಜಮೀರ್ ಸರ್ಕಾರಿ ನಿವಾಸಕ್ಕೆ ಬಂದಿದ್ದರು. ಈ ವೇಳೆ ಸಚಿವ ಜಮೀರ್ ನಿವಾಸದ ಬಳಿ ಹೈ ಡ್ರಾಮಾ ನಡೆದಿದೆ. ಪೊಲೀಸರು ಹಾಗೂ ರೂಪೇಶ್ ರಾಜಣ್ಣ ನಡುವೆ ವಾಗ್ವಾದ ನಡೆದಿದೆ.

ಸಚಿವ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಖಾನ್ ವಿರುದ್ಧ ಅಕ್ರಮ ರೆಸಾರ್ಟ್ ನಿರ್ಮಾಣ ಮಾಡಿದ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಸರ್ಫರಾಜ್ ಖಾನ್ ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಕನ್ನಡ ಸಂಘಟನೆ ಹೆಸರಲ್ಲಿ ಬ್ಲ್ಯಾಕ್ ಮೇಲ್ ಮಾಡ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದರು. ನನ್ನ ವ್ಯವಹಾರದ ವಿಚಾರದಲ್ಲಿ ಸಚಿವರ ಹೆಸರನ್ನು ತರಬೇಡಿ ಎಂದಿದ್ದರು.

ರೂಪೇಶ್ ರಾಜಣ್ಣ ಪೋಸ್ಟ್

ಸರ್ಫರಾಜ್ ಖಾನ್ ಸಾರ್ ನನ್ನ ಮೇಲಿನ ಸುಳ್ಳು ಆರೋಪ ಮಾಡಿರೋ ತಮ್ಮ ವಿಡಿಯೋ ನೋಡಿದೆ ಯಾವುದೇ ಕಾರಣಕ್ಕೂ ಸತ್ಯ ತಿಳಿಸದೆ ನಾ ಹಿಂದೆ ಸರಿಯೋಲ್ಲ. ದಯವಿಟ್ಟು ನನ್ನ ಸಂಖ್ಯೆ ಬ್ಲಾಕ್ ತೆಗೆಯಿರಿ ಹಾಗೂ ನೀವು ಹೇಳಿರೋದು ಸತ್ಯ ಅಂತ ದಾಖಲೆ ಸಮೇತ ನಿರೂಪಿಸಿ. ನಾನು ಸಿದ್ದ. ನಾಳೆ ತಮ್ಮ ಕಚೇರಿಗೆ ಬರುತ್ತಿರುವೆ ದಯವಿಟ್ಟು ಅಲ್ಲಿಯೇ ಇರಿ ಧನ್ಯವಾದಗಳು ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಪೋಸ್ಟ್ ಹಾಕಿದ್ದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read