‘ಗೃಹಲಕ್ಷ್ಮಿ’ ಫಲಾನುಭವಿಗಳ ಗಮನಕ್ಕೆ: ತೆರಿಗೆ ಪಾವತಿದಾರ ದತ್ತಾಂಶ ಪರಿಶೀಲನೆ ಬಳಿಕ ಖಾತೆಗೆ ಹಣ ಪಾವತಿ ಬಗ್ಗೆ ತೀರ್ಮಾನ

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ(ಫಲಾನುಭವಿಗಳ)ರಿಗೆ ಮುಖ್ಯ ಮಾಹಿತಿ ಇಲ್ಲಿದೆ.

ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುವುದು.

ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರು ತಿಳಿಸಿರುತ್ತಾರೆ ಕೊಡಗು ಜಿಲ್ಲೆ ಸೋಮವಾರಪೇಟೆ ಶಿಶು ಅಭಿವೃದ್ದಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಬಂದಿಸಿದ ಫಲಾನುಭವಿಗಳಿಗಾಗಿ ಸೋಮವಾರಪೇಟೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ಈ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read