BREAKING : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಬೆಂಗಳೂರು : ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಇಂದಿನಿಂದ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಈ ಕುರಿತು ನಗರ ಟ್ರಾಫಿಕ್ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ಹೆಚ್.ಎ.ಎಲ್ ಏರ್ಪೋರ್ಟ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕಾರ್ತಿಕ್ ನಗರ ಜಂಕ್ಷನ್ನಿಂದ ಕಲಾಮಂದಿರವರೆಗೆ ಹೊರವರ್ತುಲ ರಸ್ತೆಯಲ್ಲಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಸಂಬಂಧ ದಿನಾಂಕ: 28.07.2025 ರಿಂದ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿರುತ್ತದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆ :

  • ಜೀವಿಕ ಆಸ್ಪತ್ರೆ ಮಾರತ್ತಹಳ್ಳಿ ಕಡೆಯ ಸರ್ವಿಸ್ ರಸ್ತೆಯಲ್ಲಿ ಕಲಾಮಂದಿರ ಕಡೆಯಿಂದ ಹೊರವರ್ತುಲ ರಸ್ತೆಗೆ ಪ್ರವೇಶಿಸುವ ಸಂಚಾರವನ್ನು ನಿರ್ಬಂಧಿಸಲಾಗಿರುತ್ತದೆ.
  • ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಯಿಂದ ಸರ್ವಿಸ್ ರಸ್ತೆಗೆ ಪ್ರವೇಶಿಸುವ ಮಾರ್ಗವನ್ನು ನಿರ್ಬಂಧಿಸಲಾಗಿರುತ್ತದೆ.
    ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗ :
  • ಚಿನ್ನಪ್ಪನಹಳ್ಳಿ ರೈಲ್ವೆ ಗೇಟ್ ಕಡೆಯಿಂದ ಕಾಡುಬೀಸನಹಳ್ಳಿ ಮತ್ತು ದೇವರಬೀಸನಹಳ್ಳಿ ಕಡೆಗೆ ಸಂಚರಿಸುವ ವಾಹನಗಳು ಜೀವಿಕಾ ಆಸ್ಪತ್ರೆಯ ಸರ್ವೀಸ್ ರಸ್ತೆಯ ಮೂಲಕ ಸಂಚರಿಸಿ ಕಡ್ಡಾಯವಾಗಿ ಯಮಹಾ ಶೋ ರೂಂ ಬಳಿ ಹೊರವರ್ತುಲ ರಸ್ತೆಗೆ ಪ್ರವೇಶಿಸಿ ಸಂಚರಿಸುವುದು.
  • ಮಹದೇವಪುರ ಮತ್ತು ಕಾರ್ತಿಕ್ನಗರ ಹೊರವರ್ತುಲ ರಸ್ತೆ ಕಡೆಯಿಂದ ವೈಟ್ ಫೀಲ್ಡ್ / ವರ್ತೂರು ಕಡೆಗೆ ಸಂಚರಿಸುವ ವಾಹನಗಳು ಕಳಾಮಂದಿರ ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಕುಂದಲಹಳ್ಳಿ / ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read