ಬೆಂಗಳೂರು : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಯ ಫಲಾನುಭವಿಗಳು ಮಾಹೆಯಾನ ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳು 01 ರಿಂದ 25ನೇ ತಾರೀಖಿನೊಳಗೆ ಸ್ವಯಂ–ಘೋಷಣೆಯನ್ನು ಪಲಾನುಭವಿಗಳು ವೆಬ್ ಸೈಟ್ www.sevasindhugs.karnataka.gov.in ನ ಮೂಲಕ ದಾಖಲು ಮಾಡುವುದು ಕಡ್ಡಾಯವಾಗಿರುತ್ತದೆ ಮತ್ತು ನಿಗಧಿತ ಅವಧಿಯೊಳಗೆ ಸಲ್ಲಿಸಬೇಕೆಂದು ಬೆಂಗಳೂರು, ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
