ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನ: ಜ. 17 ರಿಂದ ಸಂಚಾರ ಆರಂಭ

ಬೆಂಗಳೂರು: ಅಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮ ಜನವರಿ 22ರಂದು ನಡೆಯಲಿದೆ. ಈ ಸಂದರ್ಭದಲ್ಲಿ ಅಯೋಧ್ಯೆಗೆ ತೆರಳುವವರ ಸಂಖ್ಯೆ ಹೆಚ್ಚಾಗಿರುತ್ತದೆ. ನಂತರದ ದಿನಗಳಲ್ಲಿಯೂ ಅಯೋಧ್ಯೆಗೆ ಹೆಚ್ಚಿನ ಸಂಖ್ಯೆಯ ಭಕ್ತರು ತೆರಳುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಬೆಂಗಳೂರಿನಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.

ಜನವರಿ 17 ರಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ಬೆಂಗಳೂರು ಮತ್ತು ಕೊಲ್ಕತ್ತಾದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ. ಜನವರಿ 17ರಂದು ಬೆಂಗಳೂರು -ಅಯೋಧ್ಯ ಮಾರ್ಗದ ಮೊದಲ ವಿಮಾನ ಯಾನ ಆರಂಭವಾಗಲಿದೆ. ಅಂದು ಬೆಳಗ್ಗೆ 8.05 ಕ್ಕೆ ಹೊರಟು 10:35ಕ್ಕೆ ಅಯೋಧ್ಯ ತಲುಪಲಿದೆ. ಅಯೋಧ್ಯೆಯಿಂದ ಮಧ್ಯಾಹ್ನ 3:40ಕ್ಕೆ ಹೊರಟು ಸಂಜೆ 6.10ಕ್ಕೆ ಬೆಂಗಳೂರು ತಲುಪಲಿದೆ. airindiaexpress.com ವೆಬ್ಸೈಟ್ ಮತ್ತು ಆಪ್ ಗಳಲ್ಲಿ ವಿಮಾನಯಾನದ ವೇಳಾಪಟ್ಟಿ, ಟಿಕೆಟ್ ಬುಕಿಂಗ್ ವ್ಯವಸ್ಥೆ ಇದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read