ರಾಮ ಮಂದಿರ ಉದ್ಘಾಟನೆ ಹಿನ್ನೆಲೆ: ಜ. 22ರಿಂದ ಹೆರಿಗೆ ಸಂಪೂರ್ಣ ಉಚಿತ

ವಿಜಯಪುರ: ಅಯೋದ್ಯ ಶ್ರೀ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಮತ್ತು ಶ್ರೀ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ಹಿನ್ನೆಲೆಯಲ್ಲಿ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಐದು ದಿನ ಹೆರಿಗೆ ಉಚಿತವಾಗಿರುತ್ತದೆ.

ವಿಜಯಪುರದ ಸಿದ್ದೇಶ್ವರ ಲೋಕ ಕಲ್ಯಾಣ ಟ್ರಸ್ಟ್ ನಡೆಸುತ್ತಿರುವ ಜ್ಞಾನ ಯೋಗಿ ಸಿದ್ದೇಶ್ವರ ಸ್ವಾಮೀಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಯೋಧ್ಯ ರಾಮಮಂದಿರ ಲೋಕಾರ್ಪಣೆ ನಿಮಿತ್ತ ಜನವರಿ 22 ರಿಂದ 5 ದಿನಗಳ ಕಾಲ ಹೆರಿಗೆ ಸಂಪೂರ್ಣವಾಗಿ ಉಚಿತವಾಗಿರುತ್ತದೆ.

ಆಸ್ಪತ್ರೆಯಲ್ಲಿ ಜನಿಸಿದ ಮಗುವನ್ನು ಶ್ರೀ ರಾಮ ಹಾಗೂ ಸೀತಾದೇವಿ ಪ್ರತಿರೂಪ ಎಂದು ಪರಿಗಣಿಸಿ ಈ ಸೇವೆ ಕಲ್ಪಿಸಲಾಗುತ್ತದೆ. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಪೇಕ್ಷೆಯಂತೆ ಈ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಜೆಎಸ್ಎಸ್ ಆಸ್ಪತ್ರೆಯ ಸಿಇಒ ಡಾ. ಶರಣ್ ಮಳಖೇಡ್ಕರ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read