SHOCKING NEWS: ಕೆಂಡ ಹಾಯುವಾಗ ಅವಘಡ; ಕೆಂಡದ ಮೇಲೆ ಬಿದ್ದ ಅಯ್ಯಪ್ಪ ಮಾಲಾಧಾರಿ

ಉಡುಪಿ: ಕೆಂಡ ಸೇವೆ ನಡೆಯುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಅಯ್ಯಪ್ಪ ಮಾಲಾಧಾರಿಯೊಬ್ಬರು ಕೆಂಡದ ಮೇಲೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಅಯ್ಯಪ್ಪ ಮಂದಿರದ ವಾರ್ಷಿಕೋತ್ಸವದ ವೇಳೆ ನಡೆದಿದೆ.

ಪ್ರತಿವರ್ಷದಂತೆ ಈ ವರ್ಷವೂ ಅಯ್ಯಪ್ಪ ಮಾಲಾಧಾರಿಗಳು ಕೆಂಡಸೇವೆ ಮಾಡುತ್ತಿದ್ದರು. ಅಯ್ಯಪ್ಪ ಮಾಲಾಧಾರಿಗಳು ಒಂದು ಬದಿಯಿಂದ ಇನ್ನೊಂದು ಬದಿಗೆ ಕೆಂಡದ ಮೇಲೆ ಕುಪ್ಪಳಿಸುತ್ತಾ ಸಾಗಿದ್ದರು. ಈ ವೇಳೆ ಓರ್ವ ಮಾಲಾಧಾರಿ ಆಯತಪ್ಪಿ ನಿಗಿ ನಿಗಿ ಕೆಂಡದ ಮೇಲೆ ಬಿದ್ದಿದ್ದಾನೆ.

ನೆರೆದಿದ್ದ ಜನರು ತಕ್ಷಣ ಆತನ ರಕ್ಷಣೆಗೆ ಧಾವಿಸಿದ್ದಾರೆ. ಮಾಲಾಧಾರಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read